ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-07-28 07:16 GMT

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸುದ್ದಿಗಾರರ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಮ್ಮ ಸರಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಲಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಪ್ರವಾಹ, ಕೋವಿಡ್ ಸಮಸ್ಯೆಗಳಲ್ಲದೆ ಆರ್ಥಿಕ ಮತ್ತು ಸಾಮಾಜಿಕ ಸವಾಲುಗಳಿದೆ. ಸವಾಲುಗಳನ್ನೇ ಮೆಟ್ಟಿಲುಗಳಾಗಿ ಮಾಡಿಕೊಳ್ಳುತ್ತೇವೆ ಎಂದು ತಿಳಸಿದರು. 

ಕೆಲವೊಂದು ಸಮಸ್ಯೆಗಳಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದು, ಒಂದು ತಂಡವಾಗಿ ನಾವು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಡವರ ಶ್ರೇಯಾಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News