ಕುಂದಾಪುರ: ಜಾಲಾಡಿ ಸಮೀಪ ಕಾರು ಢಿಕ್ಕಿ: ಸೈಕಲ್ ಸವಾರ ಮೃತ್ಯು

Update: 2021-07-28 07:21 GMT

ಕುಂದಾಪುರ, ಜು.28: ಕಾರು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(52) ಎಂದು ಗುರುತಿಸಲಾಗಿದೆ. ಗಾಯಗೊಂಡ ರಾಮ ಕುಲಾಲ್ ಅವರನ್ನು ಗಂಗೊಳ್ಳಿ ಆಪತ್ಭಾಂದವ ಆ್ಯಂಬುಲೆನ್ಸ್ ಇಬ್ರಾಹೀಂ ಗಂಗೊಳ್ಳಿ ಕುಂದಾಪುರ ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರು ದಾರಿಮಧ್ಯೆ ಮೃತಪಟ್ಟರೆನ್ನಲಾಗಿದೆ.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News