ಪಕ್ಷ ವಹಿಸುವ ಕೆಲಸವನ್ನು ನಾನು ಮಾಡುತ್ತೇನೆ: ಬಿ.ವೈ.ವಿಜಯೇಂದ್ರ

Update: 2021-07-28 15:58 GMT

ಬೆಂಗಳೂರು, ಜು. 28: `ನಾನು ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ಪಕ್ಷ ನೀಡಿದ ಕೆಲಸ ಮಾಡುತ್ತೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯದಾದ್ಯಂತ ಪ್ರವಾಸ ಮಾಡುವ ಕೆಲಸ ಮಾಡುತ್ತಿದ್ದೆ, ಇದೀಗ ಅದನ್ನೆ ಮುಂದುವರಿಸುತ್ತೇನೆ' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.

ಬುಧವಾರ ರಾಜಭವನದಲ್ಲಿ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೂತನ ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎಂದು ಪಕ್ಷದ ವರಿಷ್ಟರು ತೀರ್ಮಾನ ಮಾಡಲಿದ್ದಾರೆ. ಹೊಸಬರಿಗೆ ಮತ್ತು ಯುವಕರಿಗೆ ಆದ್ಯತೆ ನೀಡುವ ಭರವಸೆ ಇದೆ. ವಲಸಿಗ ಸಚಿವ ಸ್ಥಾನ ವಿಚಾರವನ್ನು ರಾಜ್ಯಾಧ್ಯಕ್ಷರು ಮತ್ತು ಸಿಎಂ ನಿರ್ಧರಿಸಲಿದ್ದಾರೆ ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಥಾನಮಾನ ಏನು ಎಂಬ ಪ್ರಶ್ನೆಗೆ ನೀವು ಅವರನ್ನೇ ಕೇಳಬೇಕು ಎಂದು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ನೂತನ ಸರಕಾರ ಉತ್ತಮ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News