ಲಕ್ಷದ್ವೀಪಕ್ಕೆ ರಾಜ್ಯದ ಸ್ಥಾನಮಾನ ಇಲ್ಲ: ರಾಜ್ಯಸಭೆಯಲ್ಲಿ ತಿಳಿಸಿದ ಸಚಿವ ನಿತ್ಯಾನಂದ ರಾಯ್

Update: 2021-07-28 17:12 GMT

ಹೊಸದಿಲ್ಲಿ, ಜು. 28: ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪಕ್ಕೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನ ನೀಡುವ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಸರಕಾರ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿತು. ರಾಜ್ಯಸಭೆಯಲ್ಲಿ ಲಿಖಿತ ಹೇಳಿಕೆ ಮೂಲಕ ಈ ಮಾಹಿತಿಯನ್ನು ಕೇಂದ್ರದ ಸಹಾಯಕ ಸಚಿವ ನಿತ್ಯಾನಂದರ ರಾಯ್ ಅವರು ತಿಳಿಸಿದರು. 

ಲಕ್ಷದ್ವೀಪಕ್ಕೆ ಪೂರ್ಣಪ್ರಮಾಣದ ರಾಜ್ಯದ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಪರಿಶೀಲಿಸುತ್ತಿದೆಯೇ ಹಾಗೂ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಲಕ್ಷದ್ಪೀಪದ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಯಾವ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂಬ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪಕ್ಕೆ ಸಂಪೂರ್ಣ ರಾಜ್ಯದ ಸ್ಥಾನ ಮಾನ ನೀಡುವ ಪ್ರಸ್ತಾವ ಕೇಂದ್ರ ಸರಕಾರದಲ್ಲಿ ಇಲ್ಲ ಎಂದು ರಾಯ್ ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News