ಬೇಲೂರು: 30ಕ್ಕೂ ಹೆಚ್ಚು ಮಂಗಗಳ ಶವ ಪತ್ತೆ

Update: 2021-08-02 11:33 GMT

ಬೇಲೂರು. ಜುಲೈ. 29 : ಮಂಗಗಳನ್ನು  ಗೋಣಿ ಚೀಲದಲ್ಲಿ ತುಂಬಿಸಿ ಚೌಡನೇಹಳ್ಳಿ ಗ್ರಾಮದ ಬಳಿ ರಸ್ತೆ ಪಕ್ಕದಲ್ಲಿ ಬಿಸಾಡಿದ ಘಟನೆ ನಡೆದಿದ್ದು, ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಮತ್ತು ವಲಯ ಅರಣ್ಯಾಧಿಕಾರಿ ಯೆಷ್ಮಾ ಮಾಚಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಸದ್ಯ ತನಿಖೆಗೆ ಆದೇಶಿಸಲಾಗಿದೆ.

ತಾಲೂಕಿನ ಬಿಕ್ಕೋಡು ಹೋಬಳಿ ಕುಶಾವಾರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಚೌಡನೇಹಳ್ಳಿ ಗ್ರಾಮದ ಬಳಿ ಅಪರಿಚಿತರು ತಮ್ಮ ವಾಹನದಲ್ಲಿ 34 ಕ್ಕೂ ಹೆಚ್ಚಿನ ಮಂಗಗಳನ್ನು ಸಾಯಿಸಿ ಬಿಸಾಡಿದ್ದಾರೆ. ಈ ಬಗ್ಗೆ ಸ್ಥಳೀಯರೊಬ್ಬರು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಈ ಮಂಗಗಳನ್ನು ವಿಷಾಹಾರ ನೀಡಿ ಸಾಯಿಸಿ ಗೋಣಿ ಚೀಲದಲ್ಲಿ ತುಂಬಿಸಿ ಇಲ್ಲಿ ತಂದು ಎಸೆದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 

ನಂತರ ಗ್ರಾಮಸ್ಥರು ಜೆಸಿಬಿ ಮೂಲಕ ವಿಶೇಷ ಪೂಜೆ ಸಲ್ಲಿಸಿ ಮಂಗಗಳನ್ನು ಸಂಸ್ಕಾರ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ತೇಜು ,ಕೌಶಿಕ್,ರಾಜಣ್ಣ,ಉಪವಲಯ ಅರಣ್ಯಾಧಿಕಾರಿ ಗುರುರಾಜ್,ಎಎಸ್ ಐ ಕುಮಾರ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News