ಕೇರಳದಲ್ಲಿ ಕೊರೋನ ಹಾವಳಿ: ಕಾಳಜಿ ವಹಿಸಿ ಎಂದು ರಾಹುಲ್ ಗಾಂಧಿ ಮನವಿ
ಹೊಸದಿಲ್ಲಿ: ಕೇರಳದಲ್ಲಿ ಕೊರೋನ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿರುವ ಆತಂಕಕಾರಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಶುಕ್ರವಾರ ಮಾಡಿದ್ದಾರೆ.
ಎಲ್ಲಾ ಸುರಕ್ಷಿತ ಕ್ರಮಗಳು ಹಾಗೂ ಮಾರ್ಗಸೂಚಿಗಳನ್ನು ಅನುಸರಿಸುವಂತೆ ನಾನು ರಾಜ್ಯದ ನಮ್ಮ ಸಹೋದರರು ಹಾಗೂ ಸಹೋದರಿಯರಿಗೆ ಮನವಿ ಮಾಡುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ದಯವಿಟ್ಟು ಕಾಳಜಿ ವಹಿಸಿ ಎಂದು ಮನವಿ ಮಾಡಿದ್ದಾರೆ.
ದೇಶದ ಬೇರೆ ರಾಜ್ಯಗಳಲ್ಲಿ ಕೊರೋನ ಆರ್ಭಟ ಇಳಿಯುತ್ತಿದ್ದರೆ ಕೇರಳದಲ್ಲಿ ಮಾತ್ರ ಏರಿಕೆಯಾಗುತ್ತಿದೆ. ದೇಶದ ಸಕ್ರಿಯ ಪ್ರಕರಣಗಳ ಪೈಕಿ ಶೇ.37.ರಷ್ಟು ಕೇರಳದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಎಸ್.ಕೆ. ಸಿಂಗ್ ನೇತೃತ್ವದ 6 ಸದಸ್ಯರ ತಂಡವು ಇಂದು ಕೇರಳ ತಲುಪಿದೆ. ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
Rising cases of Coronavirus infections in Kerala are worrying.
— Rahul Gandhi (@RahulGandhi) July 30, 2021
I appeal to our brothers and sisters in the state to follow all safety measures & guidelines.
Please take care.