ಸಚಿವ ಸಂಪುಟ ರಚನೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ : ಯಡಿಯೂರಪ್ಪ

Update: 2021-07-30 09:04 GMT

ಚಾಮರಾಜನಗರ : ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ, ಯಾರನ್ನು ಸಚಿವರನ್ನಾಗಿ ಮಾಡ ಬೇಕೆಂಬುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿರ್ಧಾರ ಮಾಡುವರು, ಅವರು ಸಚಿವ ಸಂಪುಟ ರಚನೆಗೆ ಸ್ವತಂತ್ರರಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಚಾಮರಾಜನಗರದಲ್ಲಿ ಹೇಳಿದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಯಡಿಯೂರಪ್ಪ ಅವರ ಅಭಿಮಾನಿ ರವಿ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲು ಗುಂಡ್ಲುಪೇಟೆಗೆ ಆಗಮಿಸಿದ ಯಡಿಯೂರಪ್ಪ ಮಾದ್ಯಮದವರೊಂದಿಗೆ ಮಾತನಾಡಿದರು.

ವಿರೋಧ ಪಕ್ಷದವರು ಮನಸ್ಸಿಗೆ ಘಾಸಿಯಾಗುವಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದ ಯಡಿಯೂರಪ್ಪ, ಮುಂದಿನ ಗಣೇಶನ ಹಬ್ಬದ ಬಳಿಕ ಪ್ರತಿ ವಾರ ಒಂದೊಂದು ಜಿಲ್ಲೆಗೆ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ. 2023ರ ಸಾರ್ವತ್ರಿಕ ವಿಧಾನ ಸಭೆ ಚುನಾವಣೆಯಲ್ಲಿ 130ರಿಂದ135 ಸ್ಥಾನಗಳನ್ನು ಬಿಜೆಪಿ ಶಾಸಕರು ಗೆಲ್ಲಿಸುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆಯಾಗುವಂತೆ ಮಾಡಲು ನಿರ್ಧಾರ ಮಾಡಿರುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News