​ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

Update: 2021-07-30 16:23 GMT

ಉಡುಪಿ, ಜು.30: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2020ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣ ಬರಹ, ಅನುವಾದ-1 (ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ ಸೃಜನೇತರ ಕೃತಿಗಳು), ಅನುವಾದ-2 (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಸೃಜನ/ ಸೃಜನೇತರ ಕೃತಿ), ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷ್‌ಗೆ ಅನುವಾದ, ದಾಸ ಸಾಹಿತ್ಯ ಮತ್ತು ಸಂಕೀರ್ಣ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹು ಮಾನ ನೀಡಲಾಗುವುದು. 2020ರ ಜನವರಿ 1ರಿಂದ ಡಿಸೆಂಬರ್ 31ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ, ಕೃತಿಯಲ್ಲಿ ಪ್ರಥಮ ಮುದ್ರಣ 2020 ಎಂದು ಮುದ್ರಿತವಾಗಿರುವ ಕೃತಿಗಳ್ನು ಬಹುಮಾನಕ್ಕೆ ಸಲ್ಲಿಸಬಹುದು.

ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ರಿಜಿಸ್ಟರ್ಡ್ ಅಂಚೆ, ಕೊರಿಯರ್ ಅಥವಾ ಖುದ್ದಾಗಿ ಸಲ್ಲಿಸಲು ಸೆ.15 ಕೊನೆಯ ದಿನವಾಗಿದೆ. ಕಳುಹಿಸಲ್ಪಡುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ನಮೂದಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News