ರೌಡಿ ಹರೀಶ್ ಕೊಲೆ ಪ್ರಕರಣ: ಐವರ ಬಂಧನ

Update: 2021-07-30 18:18 GMT

ಬೆಂಗಳೂರು, ಜು.30: ಹಳೆ ದ್ವೇಷದ ಹಿನ್ನೆಲೆಯಲ್ಲಿ ಹಾಡಹಗಲೇ ರೌಡಿ ಹರೀಶ್ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದ ಆರೋಪ ಪ್ರಕರಣ ಸಂಬಂಧ ಐವರನ್ನು ಬಾಣಸವಾಡಿ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಣಸವಾಡಿಯ ರಕ್ಷಿತ್, ನೆಲ್ಸನ್, ಅವಿನಾಶ್, ಸುಭಾಷ ಮತ್ತು ಇಂದ್ರಜಿತ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಎಸ್ .ಡಿ.ಶರಣಪ್ಪ ತಿಳಿಸಿದ್ದಾರೆ. 

ಬಸವೇಶ್ವರನಗರದ ರೌಡಿ ಹರೀಶ್‍ನನ್ನು ಮೂರು ದಿನಗಳ ಹಿಂದಷ್ಟೇ  ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಆರೋಪಿಗಳ ಬಗ್ಗೆ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ ಎಂದರು.

ಈ ಹಿಂದೆ ರಕ್ಷಿತ್ ಎಂಬಾತನ ಮೇಲೆ ಮೃತ ಹರೀಶ್ ಹಲ್ಲೆ ಮಾಡಿದ್ದು, ಇದೇ ದ್ವೇಷದಿಂದ ಆರೋಪಿಗಳು ಆಕ್ರೋಶಗೊಂಡು ಈ ಕೃತ್ಯವೆಸಗಿದ್ದಾರೆ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ. ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News