ಭಟ್ಕಳ: ಭೌತಶಾಸ್ತ್ರದ ಪ್ರಾಧ್ಯಾಪಕ ಪ್ರೊ. ಎಸ್. ಎ. ಅತ್ತಾರ್ ನಿವೃತ್ತಿ

Update: 2021-07-30 18:22 GMT

ಭಟ್ಕಳ: ಇಲ್ಲಿನ ಪ್ರತಿಷ್ಠಿತ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರದ ಪ್ರಾಧ್ಯಾಪಕರಾದ ಪ್ರೊ. ಎಸ್. ಎ. ಅತ್ತಾರ ಅವರು ತಮ್ಮ 33 ವರ್ಷಗಳಿಗಿಂತ ಹೆಚ್ಚು ಕಾಲದ ಸೇವೆಯ ನಂತರ ಇಂದು ಸೇವಾ ನಿವೃತಿ ಹೊಂದಿದ್ದಾರೆ.

ಪ್ರೊ. ಅತ್ತಾರ ಮೂಲತಃ ಬಿಜಾಪುರ ಜಿಲ್ಲೆಯವರಾಗಿದ್ದು, ಭಟ್ಕಳದ ಅಂಜುಮನ್ ಪದವಿ ಕಾಲೇಜಿಗೆ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. 

ಪ್ರೊ. ಅತ್ತಾರ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಮುಸ್ತಾಕ್ ಕೆ. ಶೇಖ, ಪ್ರಾಧ್ಯಾಪಕ ಮಿತ್ರರು, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News