ಕುಂದಾಪುರ: ಕೋಟೇಶ್ವರ ಸಮೀಪ ಫೈನಾನ್ಸಿಯರ್‌ ನ ಹತ್ಯೆ

Update: 2021-07-31 06:16 GMT

ಕುಂದಾಪುರ, ಜು.31: ಕೋಟೇಶ್ವರ ಸಮೀಪದ ಕಾಳಾವರ ಎಂಬಲ್ಲಿ ಫೈನಾನ್ಸಿಯರ್‌ ಒಬ್ಬರನ್ನು ದುಷ್ಕರ್ಮಿಗಳು ಅವರ ಫೈನಾನ್ಸ್ ನಲ್ಲಿಯೇ ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದಿರುವ ಘಟನೆ ಜು.30ರಂದು ತಡರಾತ್ರಿ ಬೆಳಕಿಗೆ ಬಂದಿದೆ.

ಕೊಲೆಗೀಡಾದವರನ್ನು ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಎಂದು ಗುರುತಿಸಲಾಗಿದೆ. ಫೈನಾನ್ಸ್ ನ ಹಣಕಾಸು ವಿಚಾರದಲ್ಲಿ‌ ಈ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಅಜೇಂದ್ರ ಶೆಟ್ಟಿ ಕಳೆದ 5 ವರ್ಷಗಳಿಂದ ಪಾಲುದಾರಿಕೆಯೊಂದಿಗೆ ಡ್ರೀಮ್ ಫೈನಾನ್ಸ್ ಎಂಬ ಫೈನಾನ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯಾದರೂ ಇವರು ಮನೆಗೆ ಬಾರದ ಕಾರಣ ಮನೆಯವರು ಹಾಗೂ ಸ್ನೇಹಿತರು ಹುಡುಕಾಟ ನಡೆಸಿದರು. ಈ ವೇಳೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News