ಕುತ್ತಾರಿನಲ್ಲಿ ಸರಣಿ ಅಪಘಾತ: ಓರ್ವನಿಗೆ ಗಾಯ

Update: 2021-07-31 04:50 GMT

ಉಳ್ಳಾಲ, ಜು.31: ಕುತ್ತಾರು ಮದನಿ ನಗರ ಸಮೀಪ ಶುಕ್ರವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಗಾಯಗೊಂಡಿರುವುದು ವರದಿಯಾಗಿದೆ.

ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಬಳಿಕ ವೈದ್ಯ ವಿದ್ಯಾರ್ಥಿಗಳಿದ್ದ ಇನ್ನೊಂದು ಕಾರಿಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಇದರಿಂದ  ರಿಕ್ಷಾ ಚಾಲಕ ದೇರಳಕಟ್ಟೆ ಬದ್ಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (35) ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯ ವಿದ್ಯಾರ್ಥಿನಿಯರಿದ್ದ ಕಾರು ಕೂಡಾ ಜಖಂಗೊಂಡಿದ್ದರೂ ವಿದ್ಯಾರ್ಥಿನಿಯರು ಅಪಾಯಗಳಿಲ್ಲದೆ ಪಾರಾಗಿದ್ದಾರೆ. ರಿಕ್ಷಾ ನಜ್ಜುಗುಜ್ಜಾಗಿದೆ.

ಈ ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಕಾರನ್ನು ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರನ್ನು ನಾಗುರಿ ಸಂಚಾರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News