ರಾಜ್ಯದಲ್ಲಿ ಶನಿವಾರ 1,987 ಮಂದಿಗೆ ಕೊರೋನ ಪಾಸಿಟಿವ್, 37 ಮಂದಿ ಮೃತ್ಯು

Update: 2021-07-31 15:09 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು. 31: ರಾಜ್ಯದಲ್ಲಿ ಶನಿವಾರ 1,987 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 37 ಜನರು ಸೋಂಕಿಗೆ ಬಲಿಯಾಗಿದ್ದು, 1,632 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,05,124ಕ್ಕೆ ಏರಿಕೆಯಾಗಿದ್ದು, ಈವರೆಗೂ ಒಟ್ಟು ಸಾವಿನ ಸಂಖ್ಯೆ 36,562ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 23,796ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

37 ಮಂದಿ ಸೋಂಕಿಗೆ ಬಲಿ: ರಾಜ್ಯದಲ್ಲಿಂದು ಒಟ್ಟು 37 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಬೆಂಗಳೂರು ನಗರದಲ್ಲಿ 11, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಹಾಸನ 4, ಚಿಕ್ಕಮಗಳೂರು, ಕೋಲಾರ ಹಾಗೂ ಮೈಸೂರಿನಲ್ಲಿ ತಲಾ 2 ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಕೋವಿಡ್ ಬುಲೆಟಿನ್‍ನಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,987 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 4, ಬಳ್ಳಾರಿ 15, ಬೆಳಗಾವಿ 56, ಬೆಂಗಳೂರು ಗ್ರಾಮಾಂತರ 40, ಬೆಂಗಳೂರು ನಗರ 450, ಚಾಮರಾಜನಗರ 23, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 55, ಚಿತ್ರದುರ್ಗ 26, ದಕ್ಷಿಣ ಕನ್ನಡ 356, ದಾವಣಗೆರೆ 14, ಧಾರವಾಡ 19, ಗದಗ 3, ಹಾಸನ 105, ಹಾವೇರಿ 3, ಕಲಬುರಗಿ 6, ಕೊಡಗು 132,, ಕೋಲಾರ 51, ಕೊಪ್ಪಳ 7, ಮಂಡ್ಯ 47, ಮೈಸೂರು 177, ರಾಯಚೂರು 1, ರಾಮನಗರ 8, ಶಿವಮೊಗ್ಗ 40, ತುಮಕೂರು 108, ಉಡುಪಿ 148, ಉತ್ತರ ಕನ್ನಡ 75, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿವೆ.

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ 450 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 11 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,27,339 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,872 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,02,937 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News