ಬಿಜೆಪಿಯವರಿಗೆ ಅಭಿವೃದ್ಧಿಗಿಂತ ಅಧಿಕಾರ ಮುಖ್ಯ: ಸಿದ್ದರಾಮಯ್ಯ

Update: 2021-07-31 15:43 GMT
ಸಿದ್ದರಾಮಯ್ಯ (File Photo)

ಮೈಸೂರು,ಜು.31: ಬಿಜೆಪಿಯವರಿಗೆ ರಾಜ್ಯದ ಅಭಿವೃದ್ಧಿಗಿಂತ ಅಧಿಕಾರ ಮುಖ್ಯ, ಹಾಗಾಗಿಯೇ ಒಬ್ಬರಿಗೊಬ್ಬರು ಕಿತ್ತಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಅಧಿಕಾರ ಮುಖ್ಯ ಅದಕ್ಕಾಗಿಯೇ ಅವರು ಕಚ್ಚಾಡುತ್ತಿದ್ದಾರೆ ಎಂದು ಶಾಸಕರುಗಳಾದ ಅಶೋಕ್ ಮತ್ತು ವಿ.ಸೋಮಣ್ಣ ಅವರ ನಡುವಿನ ವಾಗ್ವಾದ ಕುರಿತು ಪತ್ರಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಬಿಜೆಪಿಯವರಿಗೆ ಅಭಿವೃದ್ಧಿ ಮುಖ್ಯ ಅಲ್ಲ, ಅವರಿಗೆ ಅಧಿಕಾರ ಮತ್ತು ಸ್ವಾರ್ಥ ಮುಖ್ಯ ಅದಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ಹರಿಹಾಯ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News