ಉಪ್ಪಿನಂಗಡಿ: ಮಹಿಳೆಗೆ ಹಲ್ಲೆ ಆರೋಪ; ನಿವೃತ್ತ ಸೇನಾ ಸಿಬ್ಬಂದಿ ಸೆರೆ

Update: 2021-07-31 17:31 GMT

ಉಪ್ಪಿನಂಗಡಿ: ಮಹಿಳೆಗೆ ಹಲ್ಲೆ ನಡೆಸಿದ ಆರೋಪದಲ್ಲಿ ನಿವೃತ್ತ ಸೇನಾ ಸಿಬ್ಬಂದಿಯನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಯಕುಮಾರ್ ಪೂಜಾರಿ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಶಬರಿಗಿರಿ ಮನೆ ನಿವಾಸಿ  ಶಶಿಕುಮಾರ್ ಪಿಳ್ಳೆ ಅವರ ಪತ್ನಿ ಆಶಾ ಎಂಬವರಿಗೆ ಎ.15 ರಂದು  ಆರೋಪಿ ಕಲ್ಲೆಸೆದು ಕಣ್ಣಿಗೆ ಗಾಯ ಮಾಡಿ, ಅವ್ಯಾಚ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆಶಾ ಅವರು ಪುತ್ತೂರು ಡಿವೈಎಸ್ಪಿ ಅವರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News