ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಪೊನ್ನುರಾಜ್ ನೇಮಕ

Update: 2021-08-01 12:45 GMT
ಐಎಎಸ್ ಅಧಿಕಾರಿ ಪೊನ್ನುರಾಜ್

ಬೆಂಗಳೂರು, ಆ. 1: ಸಾರ್ವಜನಿಕ ಆಡಳಿತದ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ಬರು ಐಎಎಸ್ ಅಧಿಕಾರಿಗಳು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಐಎಎಸ್ ಅಧಿಕಾರಿ ಡಾ.ಸೆಲ್ವಕುಮಾರ್ ಅವರನ್ನು ಸಿಎಂ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿದ್ದು, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ  ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆಗೆ ನೇಮಿಸಿದ್ದು, ಜೊತೆಗೆ ಕೆಪಿಸಿಎಲ್ ಎಂಡಿಯಾಗಿಯೂ ಹೆಚ್ಚುವರಿ ಹುದ್ದೆಯನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News