ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಭಾರಿಗಳ ನೇಮಕ

Update: 2021-08-01 13:06 GMT
 ಮುನಿಸ್ವಾಮಿ                   ವೆಂಕಟೇಶ್ ಮೌರ್ಯ                    ಜಯಕುಮಾರ್ ಕಾಂಗೆ

ಬೆಂಗಳೂರು, ಆ. 1: ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಪ್ರಭಾರಿಗಳನ್ನಾಗಿ ಕರ್ನಾಟಕದ ಮೂವರನ್ನು ನೇಮಕ ಮಾಡಲಾಗಿದೆ. ಸಂಸದ ಮುನಿಸ್ವಾಮಿ ಅವರನ್ನು ಕೇರಳ ರಾಜ್ಯಕ್ಕೆ, ವೆಂಕಟೇಶ್ ಮೌರ್ಯ ಅವರನ್ನು ತಮಿಳುನಾಡು ರಾಜ್ಯಕ್ಕೆ ಮತ್ತು ಜಯಕುಮಾರ್ ಕಾಂಗೆ ಅವರನ್ನು ತೆಲಂಗಾಣ ರಾಜ್ಯಕ್ಕೆ ಪ್ರಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಮೂವರಿಗೆ ಜವಾಬ್ದಾರಿ ನೀಡಿರುವ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಭಾರಿ ಸಿ.ಟಿ.ರವಿ, ಎಸ್ಸಿ ಮೋರ್ಚಾದ ರಾಷ್ಟ್ರೀಯಾಧ್ಯಕ್ಷ ಲಾಲ್‍ಸಿಂಗ್ ಆರ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ರಿಗೆ ಧನ್ಯವಾದ ಸಲ್ಲಿಸುತ್ತೇನೆ. ಮೋರ್ಚಾ ಸಂಘಟನೆಯನ್ನು ವಿವಿಧ ರಾಜ್ಯಗಳಲ್ಲಿ ಬಲಪಡಿಸುವ ದೃಷ್ಟಿಯಿಂದ ಇವರು ಕಾರ್ಯನಿರ್ವಹಿಸಲಿದ್ದಾರೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News