ಆ.3: ಮಂಗಳೂರಿನ ವಿವಿಧೆಡೆ ವಿದ್ಯುತ್ ವ್ಯತ್ಯಯ

Update: 2021-08-01 16:32 GMT

ಮಂಗಳೂರು, ಆ.1: ಮಂಗಳೂರಿನ ವಿವಿಧೆಡೆ ದುರಸ್ತಿ ಕಾಮಗಾರಿ ಹಿನ್ನೆಲೆ ಆ.3ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಕಂಡುಬರಲಿದೆ.

ಕುದ್ರೋಳಿ: ನಗರದ 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11 ಕೆವಿ ಕಾರ್‌ಸ್ಟ್ರೀಟ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದ ಆ.3ರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಪುತ್ತು ಪ್ರಭುಲೇನ್, ಕಾರ್ಪೋರೇಶನ್ ಬ್ಯಾಂಕ್, ಗಾಯತ್ರಿ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ.

ಪಣಂಬೂರು: ಮಂಗಳೂರಿನ 33 ಕೆವಿ ಪಣಂಬೂರು ಉಪಕೇಂದ್ರದಿಂದ ಹೊರಡುವ 11 ಕೆವಿ ಪಣಂಬೂರು ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾವುಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.

ಆ.3ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮೀನಕಳಿಯ, ಚಿತ್ರಾಪುರ, ಪಡ್ಡಾಯಿ, ಹೊಸಬೆಟ್ಟು, ಮಾಸ್ಟರ್ ಐಸ್ ಪ್ಲಾಂಟ್, ಬೀಚ್ ರೋಡ್, ಕೂರಿಕಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ.

ಮೂಡುಬಿದಿರೆ: ಮೂಡುಬಿದಿರೆಯ ಉಪಕೇಂದ್ರದಿಂದ ಹೊರಡುವ 11 ಕೆವಿ ಇರುವೈಲು ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ಆ.3ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮಾಸ್ತಿಕಟ್ಟೆ, ಶೇಡಿಗುರಿ, ಹೊಸಬೆಟ್ಟು, ಇರುವೈಲು, ಹೊಸ್ಮಾರ್ ಪದವು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಗುರುಪುರ: ಇಲ್ಲಿನ ಗುರುಪುರ ಉಪಕೇಂದ್ರದಿಂದ ಹೊರಡುವ 11 ಕೆವಿ ಆದ್ಯಪಾಡಿ, ಕೈಕಂಬ ಮತ್ತು ಕುಪ್ಪೆಪದವು ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆ.3ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕಂದಾವರ, ಕಲ್ಲಾಪು, ಮೂಡುಕರೆ, ಕೌಡೂರು, ಅದ್ಯಪಾಡಿ, ಪಾದೆ, ದೋರಿಂಜೆ, ಕೈಕಂಬ ಪೇಟೆ, ಕಂದಾವರ, ಸುರಭಿಕಟ್ಟೆ, ಹೊಯಿಗೆಪದವು, ಮಟ್ಟಿ, ಕುಂದೋಡಿ, ಪದ್ರೆಂಗಿ, ಕೋರ್ಡೆಲ್, ಬ್ರಿಂಡೇಲ್, ಕಲ್ಲಾಡಿ, ಕುಪ್ಪೆಪದವು, ಕಿಲೆಂಜಾರು, ಮುರಾ, ಮುತ್ತೂರು, ಮಾರ್ಗದಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News