ಪ್ರಾಂತ್ಯ, ಜಾತಿ ಹೆಸರೇಳಿಕೊಂಡು ಸಚಿವ ಸ್ಥಾನ ಕೇಳುವ ಅವಶ್ಯಕತೆ ಇಲ್ಲ: ಸಂಸದ ಪ್ರತಾಪ್ ಸಿಂಹ

Update: 2021-08-01 18:38 GMT

ಮೈಸೂರು,ಆ.1: ಪ್ರಾಂತ್ಯ, ಜಾತಿ ಹೆಸರೇಳಿಕೊಂಡು ಸಚಿವ ಸ್ಥಾನ ಕೇಳುವ ಅವಶ್ಯಕತೆ ಇಲ್ಲ, ಯಾರಿಗೆ ಸಚಿವ ಸ್ಥಾನ ನೀಡಬೇಕು ಬಿಡಬೇಕು ಎಂದು ಪಕ್ಷ ತೀರ್ಮಾನಿಸುತ್ತದೆ ಎಂದು ಹಳೆ ಮೈಸೂರು ಪ್ರಾಂತ್ಯದಲ್ಲಿ ಸಚಿವ ಸ್ಥಾನ ಕೇಳುತ್ತಿರುವವರಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮಾಡಿ ಎಂದು ಜನ ನಮ್ಮನ್ನು ಶಾಸಕ, ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ.  ಸಚಿವರಾಗಬೇಕು ಎಂದು ಅವರು ಆಯ್ಕೆ ಮಾಡುವುದಿಲ್ಲ. ಅದನ್ನು ಅರ್ಥ ಮಾಡಿಕೊಂಡು ನಾವು ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಕೇಂದ್ರದಿಂದ ಬೊಮ್ಮಾಯಿ ಅನುದಾನ ತರಲು ಆಗುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಮೇಕೆದಾಟು ಯೋಜನೆ ಡಿಪಿಆರ್ ಮಾಡಲು ಅನುಮತಿ ಕೊಟ್ಟವರ? ಯಾರು? ತಮಿಳುನಾಡಿಗೆ ನೀಡಬೇಕಿದ್ದ 195 ಟಿಎಂಸಿ ನೀರನ್ನು 175 ಟಿಎಂಸಿಗೆ ಇಳಿಸಿ ಕರ್ನಾಟಕದ ಪರ ಪ್ರಧಾನಿ ಮೋದಿ ಅವರ ಸರ್ಕಾರ ನಿಂತಿತು. ಕೇಂದ್ರ ಸರ್ಕಾರ ಎಲ್ಲ ಕೆಲಸವನ್ನೂ ಮಾಡುತ್ತಿದೆ. ಬಹುಶಃ ಸಿದ್ದರಾಮಯ್ಯ ಅವರಿಗೆ ಮಾಹಿತಿ ಕೊರತೆ ಇದೆ ಎನಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಅಣ್ಣಾಮಲೈ ಉಪವಾಸದ ಬಗ್ಗೆ ಹೆಚ್ಚು ಚರ್ಚೆ ಬೇಡ

ಅಣ್ಣಾಮಲೈ ಅಲ್ಲಿನ ರಾಜಕೀಯಕ್ಕಾಗಿ ಅವರು ಉಪವಾಸ ಮಾಡ್ತಿದ್ದಾರೆ. ಅದರ ಬಗ್ಗೆ ನಮ್ಮಲ್ಲಿ ಹೆಚ್ಚು ಚರ್ಚೆ ಬೇಡ, 

ಸಂಸದ ಪ್ರತಾಪ್ ಸಿಂಹ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News