ಧಾರವಾಡ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಮನವಿ: ಜಗದೀಶ್ ಶೆಟ್ಟರ್

Update: 2021-08-02 17:13 GMT

ಧಾರವಾಡ, ಆ.2: ಧಾರವಾಡ ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರಿದ್ದು, ಈ ಪೈಕಿ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಗೆ ಪ್ರಾತಿನಿಧ್ಯ ಒದಗಿಸುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಇದ್ದಾಗಲೂ ಕೆಲಸ ಮಾಡಿ ತೋರಿಸಿದ್ದೇನೆ. ಅಧಿಕಾರ ಇಲ್ಲದಿದ್ದರೂ ಸಂಬಂಧಪಟ್ಟವರಿಂದ ಕೆಲಸ ಮಾಡಿಸುತ್ತೇನೆ. ಅಧಿಕಾರದಲ್ಲಿ ಯಾರೇ ಇದ್ದರೂ ಅವರಿಂದ ಕೆಲಸ ಮಾಡಿಸುವುದು ಗೊತ್ತಿದೆ ಎಂದರು.

ವಿವಿಧ ಇಲಾಖೆಗಳ ಸಚಿವನಾಗಿ ನಾನು ಅಧಿಕಾರದಲ್ಲಿ ಇದ್ದದ್ದು ಕೆಲವೇ ತಿಂಗಳು ಮಾತ್ರ. ಮುಖ್ಯಮಂತ್ರಿಯಾಗಿ 10 ತಿಂಗಳು ಮಾತ್ರ ಅಧಿಕಾರದಲ್ಲಿದ್ದೆ. ಒಂದು ವೇಳೆ ತನಗೆ ಪೂರ್ಣಾವಧಿಗೆ ಅಧಿಕಾರದಲ್ಲಿದ್ದು ಕೆಲಸ ಮಾಡಲು ಅವಕಾಶ ಸಿಕ್ಕಿದ್ದರೆ ಆಯಾ ಇಲಾಖೆಗಳಲ್ಲಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News