ಜೆಎನ್‍ಯು ಹಿಂಸಾಚಾರ ಪ್ರಕರಣ: ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ ಕೇಂದ್ರ

Update: 2021-08-03 13:48 GMT

ಹೊಸದಿಲ್ಲಿ: ಕಳೆದ ವರ್ಷ ರಾಜಧಾನಿಯ ಜವಾಹರಲಾಲ್ ನೆಹರೂ ವಿವಿಯ ಕ್ಯಾಂಪಸ್ಸಿಗೆ ಮುಸುಕುಧಾರಿ ವ್ಯಕ್ತಿಗಳು ಪ್ರವೇಶಿಸಿ ಹಿಂಸಾಚಾರದಲ್ಲಿ ತೊಡಗಿ ಹಲವು ವಿದ್ಯಾರ್ಥಿಗಳನ್ನು ಗಾಯಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದೆ.

 ಗೃಹ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಈ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದರಲ್ಲದೆ ದಿಲ್ಲಿ ಪೊಲೀಸರು ಜನವರಿ 2020ರಲ್ಲಿ ನಡೆದ ಈ ಘಟನೆ ಸಂಬಂಧ ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆಂದು ಹೇಳಿದರು. ತನಿಖೆ ನಡೆಯುತ್ತಿದೆ, ವೀಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಹಾಗೂ ಶಂಕಿತರನ್ನು ಗುರುತಿಸಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ ಆದರೆ ಘಟನೆ ನಡೆದು  ಒಂದೂವರೆ ವರ್ಷವಾದರೂ ಯಾರನ್ನೂ ಬಂಧಿಸಲಾಗಿಲ್ಲ.

ಜನವರಿ 5, 2020ರಂದು ನಡೆದ ಈ ಘಟನೆಯಲ್ಲಿ ಗಾಯಗೊಂಡ ಹಲವು  ವಿದ್ಯಾರ್ಥಿಗಳ ಪೈಕಿ ಜೆಎನ್‍ಯು ವಿದ್ಯಾರ್ಥಿ ಯೂನಿಯನ್ ಅಧ್ಯಕ್ಷ ಆಯಿಶೆ ಘೋಷ್ ಕೂಡ ಸೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News