ಸಂಪುಟ ವಿಸ್ತರಣೆ: ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ...

Update: 2021-08-03 17:40 GMT

ಬೆಂಗಳೂರು, ಆ.3: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಸಂಪುಟ ಸೇರುವ ನೂತನ ಸಚಿವರು ಯಾರಾಗಲಿದ್ದಾರೆ ಎಂಬ ಬಗ್ಗೆ ಕುತೂಹಲಕ್ಕೆ ಕಾರಣವಾಗಿದ್ದು, ಸಂಭಾವ್ಯ ಸಚಿವರ ಪಟ್ಟಿಯೊಂದರಲ್ಲಿ ಹೊಸ ಮುಖಗಳು ಕಾಣಿಸಿಕೊಂಡಿದೆ. 

ಮುಖ್ಯಮಂತ್ರಿ ಬೊಮ್ಮಾಯಿ ಅವರು ನಾಳೆ ಬೆಳಿಗ್ಗೆ ದಿಲ್ಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದು, ನಾಳೆ ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನೂತನ  ಸಚಿವರ ಪ್ರಮಾಣ ವಚನ ನಡೆಯಲಿದೆ.

ಸಂಪುಟ ಸೇರಲು ಸಾಧ್ಯತೆಯಿರುವ ಪ್ರಮುಖರು 

ಮಾಜಿ ಡಿಸಿಎಂ ಆರ್.ಅಶೋಕ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಜೆ.ಸಿ.ಮಾಧುಸ್ವಾಮಿ, ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಬಿ.ಎ.ಬಸವರಾಜ, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಪೂರ್ಣೀಮಾ ಶ್ರೀನಿವಾಸ್, ಎಂ.ಟಿ.ಬಿ.ನಾಗರಾಜ್, ಡಾ.ನಾರಾಯಣಗೌಡ, ಪಿ.ರಾಜೀವ್, ವಿ.ಸುನೀಲ್ ಕುಮಾರ್, ಉಮೇಶ್ ಕತ್ತಿ, ಎಂ.ಪಿ.ರೇಣುಕಾಚಾರ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಮುರುಗೇಶ್ ನಿರಾಣಿ, ಎಸ್.ಎ.ರಾಮದಾಸ್ ಸಂಪುಟ ಸೇರ್ಪಡೆ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News