​ಮಹಿಳೆಗೆ ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ: ದೂರು

Update: 2021-08-03 17:33 GMT

ಮಂಗಳೂರು, ಆ.3: ಮಹಿಳೆಯೊಬ್ಬರಿಗೆ ತನ್ನ ಗಂಡ ಹಾಗೂ ಇತರರು ಸೇರಿ ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ ಎನ್ನಲಾಗಿದೆ.

ಆರೋಪಿ ತುಷಾರ್ ಬಿ. ಮನೈ ಎಂಬವರು ದುಬೈಯಲ್ಲಿ ಹೊಟೇಲ್ ನಡೆಸುತ್ತಿದ್ದೇನೆ ಎಂದು ನಂಬಿಸಿ ಮದುವೆಯಾಗಿದ್ದಾರೆ. ಮದುವೆಗೆ 15 ಲಕ್ಷಕ್ಕೂ ಅಧಿಕ ಖರ್ಚು ಮಾಡಿದ್ದಾರೆ. ಮದುವೆಯಾದ ನಂತರ ಆರೋಪಿಗಳು ಸೇರಿಕೊಂಡು ಮಹಿಳೆಗೆ ನಿರಂತರವಾಗಿ ದೈಹಿಕ, ಮಾನಸಿಕ ಚಿತ್ರಹಿಂಸೆ ನೀಡಿ, ಕಾರನ್ನು ಖರೀದಿಸಲು 10 ಲಕ್ಷ ರೂ. ಹೆಚ್ಚಿನ ವರದಕ್ಷಿಣೆಯಾಗಿ ತರಲು ಒತ್ತಡ ಹಾಕಿದ್ದಾರೆ. ಅಲ್ಲದೆ, ಹೊಸ ಕಾರಿನ ಸಾಲದ ಜಾಮೀನಿಗೆ ಬಲವಂತವಾಗಿ ಹೆದರಿಸಿ, ಬೆದರಿಸಿ ಸಹಿ ಮಾಡಿಸಿ, ಕುಡಿದು ಬಂದು ಹೊಡೆದು ನಿಂದಿಸುತ್ತಿದ್ದ ಬಗ್ಗೆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಂಗಳೂರು ಮಹಿಳಾ ಠಾಣೆಯಲ್ಲಿ (ಪಾಂಡೇಶ್ವರ) ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News