ಈ ಬಾರಿ ಉಪಮುಖ್ಯಮಂತ್ರಿ ಸ್ಥಾನ ಇಲ್ಲ: ಸಿಎಂ ಬೊಮ್ಮಾಯಿ

Update: 2021-08-04 07:11 GMT

ಬೆಂಗಳೂರು: ಇಂದು ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಉಪಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ನೂತನ ಸಚಿವರ ಅಧಿಕೃತ ಪಟ್ಟಿ ರಾಜಭವನದಿಂದ ಬಿಡುಗಡೆಯಾಗಲಿದ್ದು, ಪಟ್ಟಿಯಲ್ಲಿ ಮೂರು ದಲಿತ, ಒಂದು ಎಸ್ ಟಿ,  ಏಳು ಒಬಿಸಿ ಹಾಗೂ ಎಂಟು ಲಿಂಗಾಯತ, ಏಳು ಒಕ್ಕಲಿಗರಿಗೆ ಸ್ಥಾನಮಾನ ಕಲ್ಪಿಸಲಾಗಿದೆ. ಯಾವುದೇ ಒತ್ತಡ ಇಲ್ಲದೆ ಸಚಿವ ಸಂಪುಟದ ರಚನೆಯಾಗಲಿದೆ ಎಂದು ಹೇಳಿದರು. 

 ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಅವರ ಸಂಪುಟ ಸೇರ್ಪಡಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ವಿಜಯೇಂದ್ರ ಅವರ ಹೆಸರು ರಾಜ್ಯಪಾಲರಿಗೆ ಕಳುಹಿಸಿರುವ ಪಟ್ಟಿಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು. 

ಈ ಬಗ್ಗೆ ಯಡಿಯೂರಪ್ಪ ಅವರ ಜೊತೆ ಪಕ್ಷದ ವರಿಷ್ಠರು ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News