ಕೋಟ, ಸುನೀಲ್‌ಗೆ ಸಚಿವ ಸ್ಥಾನ: ಉಡುಪಿಯಲ್ಲಿ ಸಂಭ್ರಮಾಚರಣೆ

Update: 2021-08-04 14:55 GMT

ಉಡುಪಿ, ಆ.4: ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೂತನ ಸಚಿವ ರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬುಧವಾರ ಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಎಂ.ಅಂಚನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ರಾಜ್ಯ ಅಲ್ಪಸಂಖ್ಯಾತರ ಮೋರ್ಚಾ ಕಾರ್ಯದರ್ಶಿ ಸಲೀಂ ಅಂಬಾಗಿಲು, ಮುಖಂಡ ರಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ದಾವೂದ್ ಅಬೂಬಕ್ಕರ್, ಅಲ್ವಿನ್ ಡಿಸೋಜ, ಜಗದೀಶ್ ಆಚಾರ್ಯ, ಸುದರ್ಶನ್ ನಾಯಕ್, ಭಾರತಿ ಚಂದ್ರಶೇಖರ್, ಸುಜಾಲ, ಸರೋಜ ಶೆಣೈ, ಅನಿಲ್ ಶೆಟ್ಟಿ, ಪ್ರವೀಣ್ ಶೆಟ್ಟಿ ಗುರ್ಮೆ, ಚಂದ್ರಶೇಖರ್ ಪ್ರಭು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News