ನೂತನ ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ ಹಂಚಿಕೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2021-08-04 16:51 GMT

ಬೆಂಗಳೂರು, ಆ. 4: ಕೋವಿಡ್ ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಲು ನೂತನ ಸಚಿವರಿಗೆ ಜಿಲ್ಲೆಗಳನ್ನು ಹಂಚಿಕೆ ಮಾಡಿ ಸಿಎಂ ಸೂಚನೆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಮಾಡಿದ್ದಾರೆ.

ಗೋವಿಂದ ಎಂ.ಕಾರಜೋಳ-ಬೆಳಗಾವಿ, ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್.ಅಶೋಕ್-ಬೆಂಗಳೂರು ನಗರ ಜಿಲ್ಲೆ, ಬಿ.ಶ್ರೀರಾಮುಲು-ಚಿತ್ರದುರ್ಗ, ವಿ.ಸೋಮಣ್ಣ-ರಾಯಚೂರು, ಉಮೇಶ್ ಕತ್ತಿ-ಬಾಗಲಕೋಟೆ, ಎಸ್.ಅಂಗಾರ-ದಕ್ಷಿಣ ಕನ್ನಡ, ಜೆ.ಸಿ.ಮಾಧುಸ್ವಾಮಿ-ತುಮಕೂರು, ಅರಗ ಜ್ಞಾನೇಂದ್ರ-ಚಿಕ್ಕಮಗಳೂರು, ಡಾ.ಅಶ್ವತ್ಥ ನಾರಾಯಣ-ರಾಮನಗರ, ಸಿ.ಸಿ.ಪಾಟೀಲ್-ಗದಗ.

ಆನಂದ್ ಸಿಂಗ್-ಬಳ್ಳಾರಿ ಮತ್ತು ವಿಜಯನಗರ, ಕೋಟ ಶ್ರೀನಿವಾಸ ಪೂಜಾರಿ-ಕೊಡಗು, ಪ್ರಭು ಚೌಹಾಣ್-ಬೀದರ್, ಮುರುಗೇಶ್ ಆರ್.ನಿರಾಣಿ-ಕಲಬುರಗಿ, ಶಿವರಾಮ್ ಹೆಬ್ಬಾರ್-ಉತ್ತರ ಕನ್ನಡ, ಎಸ್.ಟಿ.ಸೋಮಶೇಖರ್-ಮೈಸೂರು ಮತ್ತು ಚಾಮರಾಜನಗರ, ಬಿ.ಸಿ.ಪಾಟೀಲ್- ಹಾವೇರಿ, ಬಿ.ಎ.ಬಸವರಾಜ-ದಾವಣಗೆರೆ, ಡಾ.ಕೆ.ಸುಧಾಕರ್-ಚಿಕ್ಕಬಳ್ಳಾಪುರ, ಕೆ.ಗೋಪಾಲಯ್ಯ-ಹಾಸನ.
ಶಶಿಕಲಾ ಜೊಲ್ಲೆ-ವಿಜಯಪುರ, ಎಂ.ಟಿ.ಬಿ ನಾಗರಾಜ್-ಬೆಂಗಳೂರು ಗ್ರಾಮಾಂತರ, ಡಾ.ನಾರಾಯಣಗೌಡ-ಮಂಡ್ಯ, ಬಿ.ಸಿ.ನಾಗೇಶ್- ಯಾದಗಿರಿ, ವಿ.ಸುನೀಲ್ ಕುಮಾರ್-ಉಡುಪಿ, ಹಾಲಪ್ಪ ಆಚಾರ್-ಕೊಪ್ಪಳ, ಶಂಕರ್ ಪಾಟೀಲ್ ಮುನೇನಕೊಪ್ಪ- ಧಾರವಾಡ, ಮುನಿರತ್ನ-ಕೋಲಾರ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಮತ್ತು ಮಳೆ-ನೆರೆ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ವಿತರಣೆ ಜವಾಬ್ದಾರಿ ನೀಡಲಾಗಿದೆ.

ಸಚಿವ ಸಂಪುಟ ಸಭೆ ಬೆನ್ನಲ್ಲೇ ಮೇಲ್ಕಂಡ ಸಚಿವರಿಗೆ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ. ಕೂಡಲೇ ನೂತನ ಸಚಿವರು ಜಿಲ್ಲೆಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಅಲ್ಲದೆ, ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಪರಿಹಾರ ನೀಡಬೇಕು ಎಂದು ಸೂಚಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೆಚ್ಚಿನ ಹಣಕಾಸಿನ ನೆರವು ಅಗತ್ಯವಿದ್ದರೂ ಕೂಡಲೇ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News