ಸಚಿವ ಸಂಪುಟ: ನೂತನ ಸಚಿವರಿಗೆ ನಳಿನ್ಕುಮಾರ್ ಕಟೀಲ್ ಅಭಿನಂದನೆ
Update: 2021-08-04 16:18 GMT
ಬೆಂಗಳೂರು, ಆ.೪: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರದಲ್ಲಿ ನೂತನ ಸಚಿವರಾಗಿ ಇಂದು ಸೇರ್ಪಡೆಗೊಂಡ ಎಲ್ಲರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ಪ್ರಾದೇಶಿಕ ಸಮಾನತೆ, ಅನುಭವ ಮತ್ತು ಯುವಕರಿಗೆ ಆದ್ಯತೆ ನೀಡಿರುವ ನೂತನ ಸಚಿವ ಸಂಪುಟ ಇದಾಗಿದೆ ಎಂದು ಅವರು ತಿಳಿಸಿದ್ದಾರೆ.
ಅತ್ಯುತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಈ ರೀತಿಯ ವಿಶೇಷವಾದ ಸಂಪುಟವನ್ನು ರಚಿಸಲಾಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.