ಮೇಕೆದಾಟು ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Update: 2021-08-05 07:24 GMT

ಬೆಂಗಳೂರು: ‘ಮೇಕೆದಾಟು ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ವಿಚಾರವನ್ನು ತಮಿಳುನಾಡಿನಲ್ಲಿ ರಾಜಕಾರಣಕ್ಕೆ ಬಳಸುತ್ತಿದ್ದಾರೆ. ಅಲ್ಲಿ ಯಾವುದೇ ಪಕ್ಷದವರು ಇರಬಹುದು, ಅವರು ರಾಜಕಾರಣಕ್ಕಾಗಿ ವಿರೋಧ ಮಾಡುತ್ತಿದ್ದಾರೆ’ ಎಂದು ಸಿಎಂ ಬೊಮ್ಮಾಯಿ ಹೇಳಿದರು.

‘ಕುಡಿಯುವ ನೀರು, ವಿದ್ಯುತ್ಛಕ್ತಿ ಮತ್ತು ಕಷ್ಟ ಕಾಲದಲ್ಲಿ ನೀರನ್ನು ಹಂಚಿಕೆ ಮಾಡಬಹುದು ಎಂದು ಎಲ್ಲರಿಗೂ ಗೊತ್ತಿದೆ. ಈ ಯೋಜನೆ ಆ ಉದ್ದೇಶ ಹೊಂದಿದೆ ಎಂದು ಎಲ್ಲರಿಗೂ ಗೊತ್ತಿದೆ. ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಯೋಜನೆಯ ಬಗ್ಗೆ ತಿಳಿಸಿದ್ದೇನೆ. ರಾಜ್ಯದ ಸಂಸದರ ನಿಯೋಗದ ಜೊತೆಗೂ ಭೇಟಿ ಮಾಡಿ ಒತ್ತಾಯ ಮಾಡಿದ್ದೇನೆ’ ಎಂದು ವಿವರಿಸಿದರು.

‘ಯೋಜನೆಯ ಸಮಗ್ರ ವಿಸ್ಕೃತ ಯೋಜನೆಗೆ (ಡಿಪಿಆರ್‌) ಶೀಘ್ರದಲ್ಲಿ ಅನುಮತಿ ಸಿಗುವ ವಿಶ್ವಾವಿದೆ. ಇತರ ಎಲ್ಲದಕ್ಕೂ ಅನುಮತಿ ಸಿಗಲಿದೆ. ಅದು ಸಿಕ್ಕಿದ ತಕ್ಷಣ ಕಾಮಗಾರಿ ಆರಂಭಿಸುವುದು ಶತಸಿದ್ಧ. ಅದರಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಸಿಎಂ ತಿಳಿಸಿದರು.

‘ಯೋಜನೆ ವಿರೋಧಿಸಿ ಯಾರಾದರೂ ಪ್ರತಿಭಟನೆ ಮಾಡುತ್ತಿದ್ದರೆ ಅದಕ್ಕೂ ನಮಗೂ ಸಂಬಂಧ ಇಲ್ಲ. ಅದು ರಾಜಕಾರಣಕ್ಕೆ ಮಾಡುತ್ತಿದ್ದಾರೆ. ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ’ ಎಂದೂ ಬಸವರಾಜ ಬೊಮ್ಮಾಯಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News