ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ

Update: 2021-08-05 13:18 GMT

ಉಡುಪಿ, ಆ.5: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಲಭ್ಯವಿರುವ ಕಾಳಮೆಣಸು ಪುನಃಶ್ಚೇತನ, ಅಣಬೆ ಉತ್ಪಾದನಾ ಘಟಕಗಳ ಸ್ಫಾಪನೆ, ಕೃಷಿ ಹೊಂಡಗಳ ನಿರ್ಮಾಣ, ಸಮಗ್ರ ಪೀಡೆ/ ಪೋಷಕಾಂಶಗಳ ನಿರ್ವಹಣೆ, 20 ಅಶ್ವಶಕ್ತಿಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್ ಖರೀದಿಗೆ, ಪ್ಯಾಕ್‌ಹೌಸ್ ಘಟಕ ನಿರ್ಮಾಣಕ್ಕೆ, ಪ್ರಾಥಮಿಕ/ ಬಹುಪಯೋಗಿ ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ತೋಟಗಾರಿಕೆ ಬೆಳೆಗಳನ್ನು ಒಣಗಿಸಲು ನಿರ್ಮಾಣ ಮಾಡುವ ಸೋಲಾರ್ ಡ್ರೈಯರ್‌ಗಳಲ್ಲಿ ಉಪಯೋಗಿಸುವ ಸಿಲ್ ಪಾಲಿನ ಹಾಳೆಗಳಿಗೆ ಸಹಾಯ ಧನ ಲಭ್ಯವಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲೆಯ ತೋಟಗಾರಿಕೆ ನಿರ್ದೇಶಕರ ಕಚೇರಿ: 0820-2531950, ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರು ಉಡುಪಿ ತಾಲೂಕು:0820-2522837,ಕುಂದಾಪುರ ತಾಲೂಕು : 08254-230813 ಹಾಗೂ ಕಾರ್ಕಳ ತಾಲೂಕು: 08258-230288ನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News