ಉಡುಪಿ: ಅ. 12ಕ್ಕೆ ಸಾರಿಗೆ ಅದಾಲತ್

Update: 2021-08-05 13:43 GMT

ಉಡುಪಿ, ಆ.5: ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ಮಣಿಪಾಲದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಆ.12ರ ಗುರುವಾರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಸಾರಿಗೆ ವ್ಯವಸ್ಥೆಯಡಿಯಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂಧಪಟ್ಟ ವಿಷಯಗಳ/ಕುಂದುಕೊರತೆಗಳ ಬಗ್ಗೆ ಸಾರ್ವಜನಿಕರು ಲಿಖಿತವಾಗಿ ಆ.10ರೊಳಗೆ ಮನವಿ ಸಲ್ಲಿಸಿ ಸಾರಿಗೆ ಅದಾಲತ್‌ನಲ್ಲಿ ಭಾಗವಹಿಸಿ ವಿಷಯ ಪ್ರಸ್ತಾಪಿಸಲು ಅವಕಾಶವಿದೆ ಎಂದು ಉಡುಪಿಯ ಪ್ರಾದೇಶಿಕ ಸಾರಿಗೆ ಅದಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಜೆ.ಪಿ.ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News