ಮಂಗಳೂರು: ಶಿಕ್ಷಕಿಯ ಕರಿಮಣಿ ಸರ ಎಳೆದು ಪರಾರಿಯಾದ ಬಿಸಿಎ ಪದವೀಧರ

Update: 2021-08-05 15:40 GMT
ಕೆ.ಎಸ್.ಶ್ರೀಯಸ್

ಮಂಗಳೂರು, ಆ.5: ಶಿಕ್ಷಕಿಯೊಬ್ಬರು ಶಾಲೆಗೆ ಹೋಗುತ್ತಿದ್ದ ಸಂದರ್ಭ ಅಪರಿಚಿತ ಯುವಕನೊಬ್ಬ ಸುಮಾರು ಎರಡು ಪವನ್ ಚಿನ್ನದ ಕರಿಮಣಿ ಸರ ಎಳೆದು ಪರಾರಿಯಾಗಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಿಸಿಎ ಪದವೀಧರ ಚಿಕ್ಕಮಗಳೂರಿನ ಕೆ.ಎಸ್.ಶ್ರೀಯಸ್ (24) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಸುರತ್ಕಲ್‌ನ ಶಾಲೆಯ ಶಿಕ್ಷಕಿಯೊಬ್ಬರು ಬುಧವಾರ ಮಧ್ಯಾಹ್ನ 1:30ರ ಸುಮಾರಿಗೆ ಮನೆಯಿಂದ ಶಾಲೆಗೆ ಬರುತ್ತಿದ್ದಾಗ ವಿದ್ಯಾದಾಯಿನಿ ಸಮೀಪ ಅಂಡರ್ ಪಾಸ್ ಬಳಿ ಅಪರಿಚಿತನೊಬ್ಬ ಕರಿಮಣಿ ಸರ ಎಳೆದು ಪರಾರಿಯಾಗಿದ್ದ. ಸ್ಥಳೀಯ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಬೈಕ್ ಶೋರೂಂ ಬಳಿ ನಿಂತಿದ್ದ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಲಿಗೆ ಮಾಡಿದ್ದನ್ನು ಈತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ಚಿನ್ನದ ಕರಿಮಣಿ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸುರತ್ಕಲ್ ಇನ್‌ಸ್ಪೆಕ್ಟರ್ ಚಂದ್ರಪ್ಪ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News