​ಕ್ರೀಡಾಪಟುಗಳಿಗೆ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Update: 2021-08-07 16:19 GMT

ಮಂಗಳೂರು, ಆ.7: ರಾಷ್ಟ್ರಮಟ್ಟದಲ್ಲಿ 2020ನೇ ಸಾಲಿನಲ್ಲಿ ರಾಜ್ಯ ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಹಾಗೂ ಕೇಂದ್ರ ಸರಕಾರದಿಂದ ಅಂಗೀಕೃತವಾದ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಅಥವಾ ಪದಕ ವಿಜೇತ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆ.20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯ ದೂ.ಸಂ.: 0824-2451264ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News