ಬೆಂಗಳೂರು: ಎರಡು ಕಡೆ ಎನ್‍ಐಎ ದಾಳಿ

Update: 2021-08-08 15:38 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.8: ನೆರೆಯ ಬಾಂಗ್ಲಾದೇಶದಿಂದ ಮಾನವ ಕಳ್ಳಸಾಗಣೆ ಪ್ರಕರಣ ಸಂಬಂಧ ಬೆಂಗಳೂರಿನ ಎರಡು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‍ಐಎ) ಅಧಿಕಾರಿಗಳು ದಾಳಿ ನಡೆಸಿದರು.

ಶೋಧದ ವೇಳೆ ದೋಷಪೂರಿತ ಹಾಗೂ ನಕಲಿ ದಾಖಲೆಗಳನ್ನು ತಯಾರಿಸಲು ಬಳಸಲಾದ ಹಾರ್ಡ್ ಡಿಸ್ಕ್ ಮತ್ತು ಮೊಬೈಲ್ ಸೇರಿದಂತೆ ಆರು ಡಿಜಿಟಲ್ ಸಾಧನಗಳನ್ನು ಜಪ್ತಿ ಮಾಡಿರುವುದಾಗಿ ಎನ್‍ಐಎ ಮೂಲಗಳು ತಿಳಿಸಿವೆ.

ಜೂನ್‍ನಲ್ಲಿ ರಾಮಮೂರ್ತಿನಗರ ವ್ಯಾಪ್ತಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದಾಗ 13 ಮಂದಿ ಆರೋಪಿಗಳು ಸಿಕ್ಕಿಬಿದ್ದಿದ್ದರು. ಈ ವೇಳೆ ಬಾಂಗ್ಲಾದೇಶದ ಏಳು ಮಹಿಳೆಯರು ಹಾಗೂ ಒಂದು ಮಗುವನ್ನು ಮಾನವ ಕಳ್ಳಸಾಗಣೆದಾರರ ವಶದಿಂದ ರಕ್ಷಿಸಲಾಗಿತ್ತು.

ಅಲ್ಲದೆ, ಬಾಂಗ್ಲಾದೇಶದ ಮಾನವ ಕಳ್ಳಸಾಗಣೆದಾರರು ಹಾಗೂ ಸಾಗಣೆಗೊಂಡ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ಸೃಷ್ಟಿಸುತ್ತಿರುವ ಶಂಕಿತ ಆರೋಪಿಯ ಬಗ್ಗೆ ಸಿಕ್ಕಿದ್ದ ಮಾಹಿತಿ ಮೇರೆಗೆ ಶೋಧ ನಡೆಸಿರುವುದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News