ಉತ್ತರಪ್ರದೇಶ: ಪತ್ರಕರ್ತ, ಸಂಬಂಧಿಕರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು
Update: 2021-08-08 18:13 GMT
ಮಥುರಾ, ಆ. 8: ರಾಷ್ಟ್ರೀಯ ದಿನಪತ್ರಿಕೆಯೊಂದರ ಪತ್ರಕರ್ತ ಹಾಗೂ ಆತನ ಸಂಬಂಧಿಕರ ಮೇಲೆ ಇಲ್ಲಿನ ಸೋಂಕಾ ರಸ್ತೆಯಲ್ಲಿ ಜನರ ಗುಂಪೊಂದು ದಾಳಿ ಮಾಡಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಈ ದಾಳಿಯಿಂದ ಪತ್ರಕರ್ತ ಅನಿಲ್ ಅಗರ್ವಾಲ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಗಾಯಗೊಂಡ ಎಲ್ಲರಿಗೂ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಎಫ್ಐಆರ್ ದಾಖಲಿಸಲಾಗಿದೆ. ನಾಲ್ವರನ್ನು ಬಂಧಿಸಲಾಗಿದೆ. ಅವರಿಗೆ ನ್ಯಾಯಾಧೀಶರು ನ್ಯಾಯಾಂಗ ಕಸ್ಟಡಿ ವಿಧಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿವಾರಿ ಹೇಳಿದ್ದಾರೆ.