ಸಚಿವ ಆನಂದ್ ಸಿಂಗ್ ಗೆ ಖಾತೆ ಬದಲಾವಣೆಯ ಭರವಸೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-08-11 16:53 GMT

ಬೆಂಗಳೂರು: 'ಖಾತೆ ಹಂಚಿಕೆ' ಯಿಂದ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, 'ಖಾತೆ ಬದಲಾವಣೆ ವಿಚಾರವನ್ನು ಹೈಕಮಾಂಡ್ ಜೊತೆ ಚರ್ಚಿಸುವುದಾಗಿ ಸಿಎಂ ತಿಳಿಸಿದ್ದಾರೆ' ಎಂದು ಆನಂದ್ ಸಿಂಗ್ ಹೇಳಿದ್ದಾರೆ. 

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ರಾಜಿನಾಮೆ ಕೊಡುತ್ತೇನೆ ಎಂದು ನಾನು ಹೇಳಿಯೇ ಇಲ್ಲ. ನನ್ನ ಬೇಡಿಕೆ ಹೇಳಿದ್ದೇನೆ. ಈಡೇರಿಸುವುದಾಗಿ ಸಿಎಂ ಅವರು ತಿಳಿಸಿದ್ದಾರೆ. ಎಲ್ಲರೂ ಒಟ್ಟಾಗಿ ಹೋಗೋಣ ಎಂದಿದ್ದಾರೆ. ನಾನು ಒಪ್ಪಿಕೊಂಡಿದ್ದೇನೆ' ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ಆನಂದ್ ಸಿಂಗ್ ಅವರು ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದು ನಿಜ. ಅವರಿಗೆ ಪ್ರಸ್ತುತ ಪರಿಸ್ಥಿತಿ ಕುರಿತು ಮನದಟ್ಟು ಮಾಡಲಾಗಿದೆ. ಹೈಕಮಾಂಡ್ ಜೊತೆ ಚರ್ಚಿಸುವುದಾಗಿ ತಿಳಿಸಲಾಗಿದೆ. ಅವರು ಎಲ್ಲದಕ್ಕೂ ಒಪ್ಪಿಕೊಂಡಿದ್ದಾರೆ. ಹೀಗಾಗಿ ಯಾವುದೇ ಸಮಸ್ಯೆ ಇಲ್ಲ' ಎಂದು  ಸ್ಪಷ್ಟಪಡಿಸಿದರು. 

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ದಿನ ವಿಜಯನಗರದಲ್ಲಿ ಸಚಿವ ಆನಂದ್ ಸಿಂಗ್ ಅವರೇ ಧ್ವಜಾರೋಹಣ ಮಾಡಲಿದ್ದಾರೆ .

ಆರ್. ಅಶೋಕ್ - ಕಂದಾಯ ಸಚಿವ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News