ಬೆಂಗಳೂರು: ಹಬ್ಬಗಳಂದು ಗುಂಪುಗೂಡುವುದಕ್ಕೆ ಅವಕಾಶವಿಲ್ಲ; ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‍ಗುಪ್ತಾ

Update: 2021-08-11 17:14 GMT

ಬೆಂಗಳೂರು, ಆ.11: ಮುಂಬರುವ ವರಲಕ್ಷ್ಮಿ ಹಬ್ಬ, ಗಣೇಶ ಹಬ್ಬ ಸೇರಿದಂತೆ ಯಾವುದೇ ಹಬ್ಬಗಳಂದು ದೇವಸ್ಥಾನ ಹಾಗೂ ಮಾರುಕಟ್ಟೆಗಳಲ್ಲಿ ಗುಂಪುಗೂಡುವುದಕ್ಕೆ ಅವಕಾಶವಿಲ್ಲ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಗುಂಪುಗೂಡುವುದನ್ನು ನಿಯಂತ್ರಿಸಿಕೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‍ಗುಪ್ತ ತಿಳಿಸಿದ್ದಾರೆ. 

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರುಕಟ್ಟೆ, ದೇವಸ್ಥಾನಗಳಲ್ಲಿ ಗುಂಪುಗೂಡುವುದನ್ನು ನಿಯಂತ್ರಿಸುವ ಸಲುವಾಗಿ ಪೊಲೀಸ್, ಮಾರ್ಷಲ್, ಹೋಂ ಗಾರ್ಡ್‍ಗಳನ್ನು ನಿಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. 

ಕೋವಿಡ್ ಮೂರನೇ ಅಲೆ ಕುರಿತು ತಜ್ಞರ ಸಮಿತಿ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಠಿಣ ನಿಯಮಗಳನ್ನು ಕೈಗೊಳ್ಳುವುದಕ್ಕೆ ಅವಕಾಶ ಮಾಡಿಕೊಡಂತೆ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಸ್ವಯಂ ಪ್ರೇರಣೆಯಿಂದ ಪಾಲಿಸಬೇಕೆಂದು ಅವರು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News