ಮಂಗಳೂರು: ಅಂಬೇಡ್ಕರ್ ಭವನ ಲೋಕಾರ್ಪಣೆ
Update: 2021-08-12 12:34 IST
ಮಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.