ಚಾಮರಾಜನಗರ: ಶಾಸಕ ಎನ್. ಮಹೇಶ್ ವಿರುದ್ಧ ಪ್ರತಿಭಟನೆ
Update: 2021-08-12 14:05 IST
ಚಾಮರಾಜನಗರ: ಬಿಜೆಪಿ ಸೇರ್ಪಡೆಗೊಂಡ ಶಾಸಕ ಎನ್. ಮಹೇಶ್ ವಿರುದ್ಧ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಶಾಸಕ ಎನ್ ಮಹೇಶ್ ಪಕ್ಷಾಂತರ ಬಗ್ಗೆ ಅಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.
ದಲಿತ ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ನಗರಸಭಾ ಸದಸ್ಯ ಆರ್.ಪಿ ನಂಜುಂಡಸ್ವಾಮಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.