ಕೆ.ಎಸ್.ಗೋಪಾಲಕೃಷ್ಣ ಭಟ್
Update: 2021-08-13 13:52 GMT
ಉಡುಪಿ, ಆ.13: ಕಿದಿಯೂರು ಶ್ರೀ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆ ಯಲ್ಲಿ ಮೂರು ವರ್ಷ ಶಿಕ್ಷಕರಾಗಿ ಬಳಿಕ ಮೂರು ದಶಕಗಳ ಕಾಲ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಕೆ.ಎಸ್.ಗೋಪಾಲಕೃಷ್ಣ ಭಟ್ (81) ಗುರುವಾರ ನಿಧನ ಹೊಂದಿದರು.
ಕಿದಿಯೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ಇವರು ಅಂಬಲಪಾಡಿಯ ಶ್ರೀಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿ ಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಉತ್ತಮ ತಾಳಮದ್ದಲೆ ಅರ್ಥದಾರಿಯಾಗಿಯೂ ಕಲಾ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಗೋಪಾಲಕೃಷ್ಣ ಭಟ್ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಶಿಷ್ಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಕಿದಿಯೂರು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರೊ.ರಾಧಾಕೃಷ್ಣ ಆಚಾರ್ಯ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಅಂಬಲಪಾಡಿ ಯಕ್ಷಗಾನ ಮಂಡಳಿ ಅಧ್ಯಕ್ಷ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.