×
Ad

ರಾಜ್ಯದಲ್ಲಿಂದು 1,669 ಮಂದಿಗೆ ಕೊರೋನ ದೃಢ, 22 ಮಂದಿ ಸಾವು

Update: 2021-08-13 20:03 IST

ಬೆಂಗಳೂರು, ಆ.13: ರಾಜ್ಯದಲ್ಲಿ ಶುಕ್ರವಾರ 1,669 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 22 ಜನರು ಸೋಂಕಿಗೆ ಬಲಿಯಾಗಿದ್ದು, 1,672 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,26,401ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 36,933ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 22,703ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

22 ಸೋಂಕಿತರು ಬಲಿ: ಬೆಳಗಾವಿ 2, ಬೆಂಗಳೂರು ನಗರ 5, ಚಾಮರಾಜನಗರ 1, ಚಿತ್ರದುರ್ಗ 2, ದಕ್ಷಿಣಕನ್ನಡ 3, ದಾವಣಗೆರೆ 1, ಹಾಸನ 2, ಕೋಲಾರ 3, ತುಮಕೂರು 2, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,669 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 49, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 425, ಚಾಮರಾಜನಗರ 22, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 51, ಚಿತ್ರದುರ್ಗ 16, ದಕ್ಷಿಣ ಕನ್ನಡ 390, ದಾವಣಗೆರೆ 18, ಧಾರವಾಡ 8, ಗದಗ 3, ಹಾಸನ 113, ಕಲಬುರಗಿ 3, ಕೊಡಗು 73, ಕೋಲಾರ 27, ಕೊಪ್ಪಳ 2, ಮಂಡ್ಯ 35, ಮೈಸೂರು 106, ರಾಯಚೂರು 2, ಶಿವಮೊಗ್ಗ 56, ತುಮಕೂರು 69, ಉಡುಪಿ 115, ಉತ್ತರಕನ್ನಡ 62, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ರಾಜಧಾನಿಯಲ್ಲಿ 425 ಕೊರೋನ ಪ್ರಕರಣ ದೃಢ

 ರಾಜಧಾನಿಯಲ್ಲಿ ಶುಕ್ರವಾರದಂದು 425 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,32,220 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,933 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,08,097 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News