ಸೈಬರ್ ಪೊಲೀಸ್ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಬಾಂಬೆ ಹೈಕೋರ್ಟ್ ಸಂಪರ್ಕಿಸಿದ ರಾಜ್ ಕುಂದ್ರಾ

Update: 2021-08-14 06:05 GMT

ಮುಂಬೈ: 2020 ರಲ್ಲಿ ಸೈಬರ್ ಪೊಲೀಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ರಾಜ್ ಕುಂದ್ರಾ ಬಾಂಬೆ ಹೈಕೋರ್ಟ್‍ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಸಲ್ಲಿಸಿದ ಅಶ್ಲೀಲ ಚಿತ್ರಗಳ ಸೃಷ್ಟಿಗೆ  ಸಂಬಂಧಿಸಿದ ಇದೇ ಪ್ರಕರಣದಲ್ಲಿ ಬಂಧನದಲ್ಲಿರುವ ಕುಂದ್ರಾ ಮತ್ತೊಂದು ಪ್ರಕರಣದಲ್ಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದರು. ಸೆಷನ್ಸ್ ಕೋರ್ಟ್ ಮಂಗಳವಾರ ಕುಂದ್ರಾ ಅವರ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

 ಕಳೆದ ವರ್ಷ ದಾಖಲಿಸಿದ ಎಫ್‌ಐಆರ್‌ನಲ್ಲಿ ತನ್ನ ಹೆಸರು ಇರಲಿಲ್ಲ ಹಾಗೂ  ತನಿಖೆಗೆ ಸಹಕರಿಸಲು ಹಲವು ಸಂದರ್ಭಗಳಲ್ಲಿ ತನಿಖಾಧಿಕಾರಿ ಕಚೇರಿಗೆ ಭೇಟಿ ನೀಡಿ ವಿವರವಾದ ಹೇಳಿಕೆಯನ್ನು ಪೊಲೀಸರಿಗೆ ನೀಡಿದ್ದೇನೆ. ಸಂಬಂಧಪಟ್ಟ ಅಧಿಕಾರಿ ಕೇಳಿದ್ದ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಒದಗಿಸಿದ್ದೇನೆ ಹಾಗೂ  ಪ್ರಾಸಿಕ್ಯೂಷನ್ ಸಾಕ್ಷಿಗಳ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ಕುಂದ್ರಾ ಮನವಿಯಲ್ಲಿ ತಿಳಿಸಿದ್ದಾರೆ.

ಕುಂದ್ರಾ ಅವರ ಮನವಿಯನ್ನು ಹೈಕೋರ್ಟ್ ಸೂಕ್ತ ಸಮಯದಲ್ಲಿ ಆಲಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News