ಟಿ.ಎ. ರಹಿಮಾನ್
Update: 2021-08-14 17:09 GMT
ಪುತ್ತೂರು : ತಾಲೂಕಿನ ಬೆಟ್ಟಂಪಾಡಿ ಗ್ರಾಮದ ತಲೆಪ್ಪಾಡಿ ನಿವಾಸಿ ದಿ. ಅಬ್ದುಲ್ಲಾ ಹಾಜಿ ಅವರ ಪುತ್ರ ನಗರದ ಸಹನಾ ಟಿಂಬರ್ ಮಾಲಕ ಟಿ.ಎ. ರಹಿಮಾನ್ (63) ಹೃದಯಾಘಾತಕ್ಕೆ ಒಳಗಾಗಿ ಶುಕ್ರವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಇರ್ದೆ ಪಳ್ಳಿತ್ತಡ್ಕ ಉರೂಸ್ ಸಮಿತಿ ಅಧ್ಯಕ್ಷರಾಗಿ, ಕೊರಿಂಗಿಲ ಮಸೀದಿ ಜಮಾಅತ್ ಕಮಿಟಿ ಪದಾಧಿಕಾರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೃತರ ದಫನ ಕಾರ್ಯ ಕೊರಿಂಗಿಲ ಮಸೀದಿ ವಠಾರದಲ್ಲಿ ನಡೆಸಲಾಯಿತು.