ತುಮಕೂರು: ಧ್ವಜಕಂಬಕ್ಕೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Update: 2021-08-15 07:25 GMT
ಚಂದನ್ 

ತುಮಕೂರು : ಕೋರ ಹೋಬಳಿ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಧ್ವಜಕಂಬ ಅಳವಡಿಸುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಚಂದನ್ (16) ಮೃತಪಟ್ಟ ಬಾಲಕ. ಚಿಕ್ಕತೊಟ್ಲುಕೆರೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ.

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪವನ್, ಟ್ರ್ಯಾಕ್ಟರ್ ಷೋರೂಂನಲ್ಲಿ ಕೆಲಸ ಮಾಡುತ್ತಿರುವ ಶಶಾಂಕ್ ಗಾಯಗೊಂಡಿದ್ದಾರೆ. ಪವನ್ ಹಾಗೂ ಶಶಾಂಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೂವರು ಕರೀಕೆರೆ ಗ್ರಾಮದ ವಾಸಿಗಳಾಗಿದ್ದು ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರಧ್ವಜ ಅಳವಡಿಸಲು ಧ್ವಜಕಂಬವನ್ನು ಕೆಳಗಿಳಿಸುವ ವೇಳೆ ಹಾದು ಹೋಗಿದ್ದ ವಿದ್ಯುತ್ ಲೈನ್‌ಗೆ ಸ್ಪರ್ಶಿಸಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News