ಸ್ವಾತಂತ್ರ್ಯ ಹೋರಾಟ ನಮಗೆಲ್ಲಾ ಸದಾ ಪ್ರೇರಣೆಯಾಗಿದೆ: ಸಚಿವ ಆರ್.ಅಶೋಕ್

Update: 2021-08-15 15:14 GMT

ಬೆಂಗಳೂರು, ಆ. 15: `ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬ ಸ್ವಾತಂತ್ರ್ಯ ಹೋರಾಟಗಾರರ ಸೇವೆಗಳು ಮತ್ತು ತ್ಯಾಗಗಳನ್ನು ನಾನು ನೆನಪಿಸಿಕೊಳ್ಳಬಯಸುತ್ತೇನೆ. ಅವರ ಕೊಡುಗೆ ಅನನ್ಯ ಮತ್ತು ಅತ್ಯಮೂಲ್ಯ. ಅವರೆಲ್ಲರ ಶ್ರಮದಿಂದ ನಾವು ಸ್ವಾತಂತ್ರ್ಯವನ್ನು ಹೊಂದಿದ್ದೇವೆ' ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನ ಸ್ಮರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮರ್ಥ ನಾಯಕತ್ವದಲ್ಲಿ ಬಡವರ ಪರ ಮತ್ತು ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಯಣ್ಣ ಜನ್ಮಸ್ಥಳ ಅಭಿವೃದ್ಧಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನವನ್ನು ಹುತಾತ್ಮ ದಿನವನ್ನಾಗಿ ಸರಕಾರದ ವತಿಯಂದ ಆಚರಿಸಲು ಘೋಷಿಸಿದ ಸಿಎಂ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಸಂಗೊಳ್ಳಿ ರಾಯಣ್ಣ ಜನ್ಮಸ್ಥಳ ಅಭಿವೃದ್ಧಿಗೆ 10 ಎಕರೆ ಜಮೀನು ನೀಡಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News