ಕಾಂಗ್ರೆಸ್ ಕಣ್ಮುಚ್ಚಿ ಮುನ್ನಡೆಯುತ್ತಿದೆ: ಸುಶ್ಮಿತಾ ದೇವ್ ರಾಜೀನಾಮೆಗೆ ಕಪಿಲ್ ಸಿಬಲ್ ಪ್ರತಿಕ್ರಿಯೆ

Update: 2021-08-16 08:37 GMT

ಹೊಸದಿಲ್ಲಿ: ಕಾಂಗ್ರೆಸ್ ಈಗ ಕಣ್ಮುಚ್ಚಿಕೊಂಡು ಮುನ್ನಡೆಯುತ್ತಿದೆ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಕಪಿಲ್ ಸಿಬಲ್ ಈ ಪ್ರತಿಕ್ರಿಯೆ ನೀಡಿದರು.

ಯುವಕರು ಪಕ್ಷ ತೊರೆಯುತ್ತಿದ್ದಾರೆ. ಪಕ್ಷವನ್ನು ಬಲಪಡಿಸಲು ಯತ್ನಿಸುತ್ತಿರುವ ಹಳಬರಾದ ನಮ್ಮನ್ನು ದೂಷಿಸಲಾಗುತ್ತಿದೆ ಎಂದು ಕಪಿಲ್ ಟ್ವೀಟ್ ಮಾಡಿದ್ದಾರೆ.

ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸಲು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೈಗೊಂಡಿರುವ ಕ್ರಮಗಳಿಂದ ನನಗೆ ಸಂತೋಷವಾಗಿದೆ. ಆದರೆ ಪಕ್ಷವನ್ನು ಬಲಪಡಿಸಲು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂಬ ನಮ್ಮ ಆಗ್ರಹವನ್ನು ಮತ್ತೊಮ್ಮೆ ಹೇಳುತ್ತೇವೆ ಎಂದು ಸಿಬಲ್ PTI ಗೆ ತಿಳಿಸಿದ್ದಾರೆ.

ಇದು ನಿಜವಾಗಿದ್ದರೆ ಇದು ಅತ್ಯಂತ ದುರದೃಷ್ಟಕರ ಎಂದು ಕಾಂಗ್ರೆಸ್ ನ ಇನ್ನೋರ್ವ ನಾಯಕ ಮನೋಜ್ ತಿವಾರಿ ಅವರು ಸುಶ್ಮಿತಾ ದೇವ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ್ದಾರೆ.

ಸಿಬಲ್ ಹಾಗೂ  ಮನೀಶ್ ತಿವಾರಿ ಇಬ್ಬರೂ 'ಜಿ -23' ಅಥವಾ ಭಿನ್ನಮತೀಯರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕಳೆದ ವರ್ಷ ಸೋನಿಯಾ ಗಾಂಧಿಗೆ ಸ್ಫೋಟಕ ಪತ್ರ ಬರೆದಿದ್ದರು. 2014 ರಲ್ಲಿ ಅಧಿಕಾರ ಕಳೆದುಕೊಂಡ ನಂತರ ಪಕ್ಷದ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News