ಅಫ್ಘಾನಿಸ್ತಾನದಲ್ಲಿ ಅರಾಜಕತೆ ವಿಚಾರ: ಭಾರತಕ್ಕೂ ಅಭದ್ರತೆ ಕಾಡುವ ಸಂಭವ; ಎಚ್.ಡಿ.ದೇವೇಗೌಡ

Update: 2021-08-17 15:48 GMT

ಬೆಂಗಳೂರು, ಆ.17: ಇತ್ತೀಚಿಗೆ ಅಫ್ಘಾನಿಸ್ತಾನದಿಂದ ಬರುತ್ತಿರುವ ವರದಿಗಳನ್ನು ನೋಡಿದರೆ ಭಾರತಕ್ಕೆ ಹಾಗೂ ಇತರ ಪ್ರದೇಶಗಳಿಗೂ ಕಷ್ಟದ ಸಮಯ ಉಂಟಾಗುವಂತೆ ಕಾಣುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಮಂಗಳವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಅಫ್ಘಾನಿಸ್ತಾನ ಇತ್ತೀಚಿನ ಬೆಳವಣಿಗೆಯಿಂದ ದೇಶದಲ್ಲಿ ಭಯ ಮತ್ತು ಅಭದ್ರತೆ ಎಷ್ಟು ಆವರಿಸಿದೆ ಎಂಬುದನ್ನು ತೋರುತ್ತದೆ ಎಂದರು.

ಈ ಘಟನೆಗಳಿಗೆ ಮಾನವೀಯ ಕಳಕಳಿಯಿಂದ ನಾವು ಪ್ರತಿಕ್ರಿಯಿಸಬೇಕಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News