ಅಣ್ಣಾಮಲೈ ಕರ್ನಾಟಕದವರಲ್ಲ: ಸಚಿವ ಗೋವಿಂದ ಕಾರಜೋಳ

Update: 2021-08-17 16:47 GMT

ಬಳ್ಳಾರಿ, ಆ.17: ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕರ್ನಾಟಕದವರಲ್ಲ. ಹಾಗಾಗಿ, ಅವರು ತಮ್ಮ ರಾಜ್ಯದ ಪರವಾಗಿ ಮಾತನಾಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣಾಮಲೈ ತಮಿಳುನಾಡಿನವರು. ಹಾಗಾಗಿ, ಅವರ ರಾಜ್ಯದ ಪರವಾಗಿ ಮಾತನಾಡಿದ್ದಾರೆ. ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಕೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ರಾಜ್ಯದ ವಿವಿಧ ಭಾಗಗಳಲ್ಲಿ ನೀರು ಹಂಚಿಕೆ ಆಧಾರದ ಮೇಲೆ ಯೋಜನೆಗಳನ್ನು ರೂಪಿಸಲಾಗುವುದು ಎಂದ ಅವರು, ಇಲ್ಲಿನ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕುರಿತು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ನಡುವೆ ಸಭೆ ನಡೆಯಬೇಕಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News