ಸುನಂದಾ ಪುಷ್ಕರ್ ಸಾವಿನ ಪ್ರಕರಣ: ದಿಲ್ಲಿ ನ್ಯಾಯಾಲಯದಿಂದ ಆರೋಪ ಮುಕ್ತರಾದ ಶಶಿ ತರೂರ್
Update: 2021-08-18 06:13 GMT
ಹೊಸದಿಲ್ಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಇಂದು ದಿಲ್ಲಿ ನ್ಯಾಯಾಲಯದಿಂದ ಆರೋಪ ಮುಕ್ತರಾಗಿದ್ದಾರೆ.
ಸುನಂದಾ ಪುಷ್ಕರ್ ಅವರು ಜನವರಿ 17, 2014 ರ ರಾತ್ರಿ ದಿಲ್ಲಿಯ ಐಷಾರಾಮಿ ಹೋಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದರು.
ಸುನಂದಾ ಆತ್ಮಹತ್ಯೆ ಹಾಗೂ ಕ್ರೌರ್ಯಕ್ಕೆ ಶಶಿ ತರೂರ್ ಕುಮ್ಮಕ್ಕು ನೀಡಿದ್ದಾರೆ ಎಂದು ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ತರೂರ್ ವಿರುದ್ಧ ಆರೋಪಗಳನ್ನು ಹೊರಿಸಲು ನಿರಾಕರಿಸಿದ ನ್ಯಾಯಾಲಯ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿತು.
ವಿಶೇಷ ತನಿಖಾ ತಂಡವು ರಾಜಕಾರಣಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಿದೆ ಹಾಗೂ ಅವರ ವಿರುದ್ಧ ಯಾವುದೇ ಆರೋಪಗಳನ್ನು ಸ್ಥಾಪಿಸಲು ಯಾವುದೇ ಪುರಾವೆಗಳಿಲ್ಲದ ಕಾರಣ ಅವರನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ತರೂರ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.