ಸಂಘ ಪರಿವಾರದ ಸಂಘಟನೆ ಮೇಲಿನ ಕೇಸುಗಳನ್ನು ಹಿಂಪಡೆಯಲು ಮನವಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2021-08-19 13:10 GMT

ಬೆಂಗಳೂರು, ಆ. 19: ರಾಜ್ಯದಲ್ಲಿನ ಸಂಘ ಪರಿವಾರದ ಸಂಘಟನೆಗಳ ಮೇಲೆ ಹಾಕಲಾಗಿರುವ ಪ್ರಕರಣಗಳ ಕೈಬಿಡಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಪರಿವಾರದ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ. ಪರಿಶೀಲಿಸಿ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಲಾಗುತ್ತದೆ ಎಂದು ತಿಳಿಸಿದರು.

ಹಿಂದಿನ ಸರಕಾರದ ಅವಧಿಯಲ್ಲಿ ಒಂದು ವರ್ಗ ಸಂಘಟನೆಗಳ ಮೇಲಿನ ಕೇಸ್‍ಗಳನ್ನು ವಾಪಸ್ ಪಡೆಯಲಾಗಿತ್ತು. ಇದೀಗ ಸಂಘ ಪರಿವಾರದ ಸಂಘಟನೆಗಳ ಮೇಲಿನ ಪ್ರಕರಣಗಳ ವಾಪಸ್‍ಗೆ ಅವರಿಂದ ಮನವಿಗಳು ಬಂದಿದ್ದವು. ಈ ಮನವಿಗಳನ್ನು ನಾನು ಗೃಹ ಸಚಿವರಿಗೆ ನೀಡಿದ್ದೇನೆ. ಅವರು ಪರಿಶೀಲಿಸಿ ಹಿಂಪಡೆಯುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News