ಜನಾಶೀರ್ವಾದ ಯಾತ್ರೆಯಲ್ಲಿ ಗುಂಡು ಹಾರಾಟ: ನಮ್ಮಿಂದ ತಪ್ಪಾಗಿದೆ ಎಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Update: 2021-08-19 16:27 GMT

ಹಾವೇರಿ, ಆ.19: ಜನಾಶೀರ್ವಾದ ಯಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮಿಂದ ತಪ್ಪಾಗಿರುವುದು ನಿಜ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. 

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮರ್ಥನೆ ಮಾಡುವ ರಾಜಕಾರಣಿ ನಾನಲ್ಲ. ನನಗೆ ಬದ್ಧತೆಯಿದೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿ ಅಮಾನತುಗೊಂಡಿದ್ದಾರೆ ಎಂದರು.

ಬುಧವಾರ ಇಲ್ಲಿನ ಯಾದಗಿರಿ ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿ ಸಚಿವರನ್ನು ಮೆರವಣಿಗೆ ಮೂಲಕ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದರು. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಇದರ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News